ಕೆಜೆ ಜಾರ್ಜ್ ವಿರುದ್ಧ ಬಿಜೆಪಿ ಪ್ರತಿಭಟನೆ ಮುಂದೂಡಿಕೆ? | Oneindia Kannada

  • 7 years ago
ಸಚಿವ ಕೆ.ಜೆ.ಜಾರ್ಜ್ ವಿರುದ್ಧ ನಡೆಸಬೇಕಿದ್ದ ಪ್ರತಿಭಟನೆಯನ್ನು ಕರ್ನಾಟಕ ಬಿಜೆಪಿ ಮುಂದೂಡಿದೆ?. ಶುಕ್ರವಾರ ಬಿಜೆಪಿ ಕೆ.ಜೆ.ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಒಂದು ದಿನದ ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪಿಯೂಷ್ ಗೋಯೆಲ್ ಸಲಹೆಯಂತೆ ಪ್ರತಿಭಟನೆಯನ್ನು ಮುಂದೂಡಲಾಗಿದೆ. ಒಂದು ದಿನದ ಪ್ರತಿಭಟನೆ ನಡೆಸುವ ಬದಲು ತೀವ್ರ ಹೋರಾಟದ ರೂಪುರೇಷೆ ರೂಪಿಸುವಂತೆ ಅವರು ಸಲಹೆ ನೀಡಿದ್ದಾರೆ. ಆದ್ದರಿಂದ ಪ್ರತಿಭಟನೆ ಮುಂದೂಡಲಾಗಿದೆ. ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರ ಮಾಡಲಾಗಿದೆ. ಸಿಬಿಐ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲು ಮಾಡಿದೆ. ಆದ್ದರಿಂದ, ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಒಂದು ದಿನದ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿತ್ತು. ನವೆಂಬರ್ 14ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಆದ್ದರಿಂದ, ಸಚಿವರ ವಿರುದ್ಧ ಹೋರಾಟ ಆರಂಭಿಸಿ ಅಧಿವೇಶನದಲ್ಲಿಯೂ ಈ ವಿಚಾರದ ಬಗ್ಗೆ ಹೋರಾಟ ನಡೆಸಲು ಬಿಜೆಪಿ ಯೋಜನೆ ರೂಪಿಸುತ್ತಿದೆ. ಆದ್ದರಿಂದ, ಒಂದು ದಿನದ ಸಾಂಕೇತಿಕ ಹೋರಾಟ ಮುಂದೂಡಲಾಗಿದೆ...
Karnataka BJP protest postponed. BJP plan for a one day protest aganist Minister for urban planning and development K.J.George after CBI FIR filed against him in MK Ganapati suicide case.

Recommended