ದೀಪಿಕಾ ಪಡುಕೋಣೆ, ಬಾಲಿವುಡ್ ನಟಿಗೆ ಪದ್ಮಾವತಿ ಸಿನಿಮಾ ವಿಚಾರವಾಗಿ ಜೀವ ಬೆದರಿಕೆ | FIlmibeat Kannada
- 6 years ago
ದೀಪಿಕಾ ಪಡುಕೋಣೆ ತಲೆ ಕತ್ತರಿಸಿದ್ರೆ 5 ಕೋಟಿ ಬಹುಮಾನ. 'ಪದ್ಮಾವತಿ' ಸಿನಿಮಾ ಬಿಡುಗಡೆಯಾದ್ರೆ ದೀಪಿಕಾ ಪಡುಕೋಣೆಯ ಮೂಗು ಕತ್ತರಿಸುತ್ತೇವೆ ಎಂದು ರಜಪೂತ ಕರಣಿ ಸೇನೆ ಸದಸ್ಯರು ಬೆದರಿಕೆಯೊಡ್ಡಿದ ಬೆನ್ನಲ್ಲೆ ಈಗ ಉತ್ತರ ಪ್ರದೇಶದ ಕ್ಷತ್ರಿಯ ಸಮಾಜ ದೀಪಿಕಾ ಹಾಗೂ ಸಂಜಯ್ ಲೀಲಾ ಬನ್ಸಾಲಿ ತಲೆ ಕತ್ತರಿಸಿ ತಂದವರಿಗೆ 5 ಕೋಟಿ ಬಹುಮಾನ ಘೋಷಿಸಿದೆ. 'ಪದ್ಮಾವತಿ' ವಿವಾದಕ್ಕೆ ಸಂಬಂಧಪಟ್ಟಂತೆ ಕ್ಷತ್ರಿಯ ಸಮಾಜದ ಕಾರ್ಯಕರ್ತ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಠಾಕೂರ್ ಅಭಿಷೇಕ್ ಸೋಮ್, ದೀಪಿಕಾ ಹಾಗೂ ಸಂಜಯ್ ರುಂಡ ಕತ್ತರಿಸುವವರಿಗೆ 5 ಕೋಟಿ ರೂ. ನೀಡುವುದಾಗಿ ಘೋಷಣೆ ಮಾಡಿದ್ದು, ಅನಾಹುತವಾಗುವ ಮೊದಲು ದೇಶ ಬಿಟ್ಟು ತೆರಳುವಂತೆ ದೀಪಿಕಾಗೆ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ನಟಿ ದೀಪಿಕಾ ಅವರಿಗೆ ಮುಂಬೈನ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ದೀಪಿಕಾ ಹಾಗೂ ನಿರ್ದೇಶಕರ ಮನೆ ಹಾಗೂ ಕಛೇರಿಗಳಿಗೆ ಪೊಲೀಸ್ ಭದ್ರತೆ ನೀಡಿದ್ದಾರೆ.
Mumbai Police Increase Deepika Padukone's Security After Rajput Karni Sena's Threat!
Mumbai Police Increase Deepika Padukone's Security After Rajput Karni Sena's Threat!