ಮಂಗಳೂರು : ದೀಪಕ್ ರಾವ್ ಹತ್ಯೆ ಹಿನ್ನೆಲೆ ರಮಾನಾಥ್ ರೈ ಶೋಭಾ ಕರಂದ್ಲಾಜೆ ವಾಗ್ಯುದ್ಧ | Oneindia Kannada
  • 6 years ago
Tension gripped the coastal area after a Bajrang Dal worker was hacked to death. Now Minister Ramanath Rai and Shobha Karandlaje argues about Deepak murder. Shobha Karandlaje demands for ban on SDPI and PFI.



ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೃತ ದಿಪಕ್ ರಾವ್ ಅವರ ಶವಯಾತ್ರೆಗೆ ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು. ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು ಈ ಮುಂಚೆಯೂ ಮೆರವಣಿಗೆಗಳು ನಡೆದ ಸಂದರ್ಭದಲ್ಲಿ ಘರ್ಷಣೆಗಳಾಗಿರುವ ಉದಾಹರಣೆಗಳು ಜಿಲ್ಲೆಯಲ್ಲಿ ಇವೆ ಹಾಗಾಗಿ ಪೊಲೀಸರು ಶವ ಯಾತ್ರೆಗೆ ಅನುಮತಿ ನಿರಾಕರಿಸುತ್ತಿದ್ದಾರೆ ಎಂದರು.ಮಾಧ್ಯಮದ ಪೋನ್ ಇನ್ ನಲ್ಲಿ ಎದುರುಬದುರಾದ ಸಚಿವ ರಮಾನಾಥ ರೈ ಹಾಗೂ ಶೋಭಾ ಕರಂದ್ಲಾಜೆ ಮಧ್ಯೆ ಕಾವೇರಿದ ಆರೋಪ ಪ್ರತ್ಯಾರೋಪ ನಡೆಯಿತು, ತೀರ್ವ ಜಟಾಪಟಿ ನಡೆಸಿದ ಇಬ್ಬರು ಮುಖಂಡರು ಪರಸ್ಪರ ಪಕ್ಷಗಳನ್ನು ಮೂದಲಿಸಿಕೊಂಡರು.ಜಿಹಾದಿ ಮನಸ್ಥಿತಿಯ ಸಂಘಟನೆಗಳಾದ ಎಸ್‌ಡಿಪಿಐ, ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಿ ಎಂಬ ಶೋಭಾ ಕರಂದ್ಲಾಜೆ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಸಚಿವ ರಮಾನಾಥ ರೈ ಅವರು ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗಲೂ ಪಿಎಫ್ಐ, ಎಸ್‌ಡಿಪಿಐ ಸಂಘಟನೆಗಳು ಅಸ್ತಿತ್ವದಲ್ಲಿತ್ತು, ಆಗ ಏಕೆ ಅವರು ನಿಷೇಧಿಸಲಿಲ್ಲ, ಆ ಸಂಘಟನೆಗಳು ಕರ್ನಾಟದಲ್ಲಿ ಮಾತ್ರವಲ್ಲ ದೇಶದ ಎಲ್ಲೆಡೆ ಇವೆ ಮೋದಿ ಅವರೇ ಸಂಘಟನೆಗಳ ಮೇಲೆ ನಿಷೇಧ ಹೇರಲಿ ಎಂದರು.
Recommended