ಚನ್ನಪಟ್ಟಣದಿಂದ ಯೋಗೇಶ್ವರ್ ವಿರುದ್ಧ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡ್ತಾರಾ ? | Oneindia Kannada

  • 6 years ago
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಅವರ ಚುನಾವಣಾ ರಾಜಕೀಯಕ್ಕೆ ಅಂತ್ಯ ಹಾಡಲು ಜೆಡಿಎಸ್ ಹಾಗೂ ಕಾಂಗ್ರೆಸ್ ಪಣತೊಟ್ಟಂತೆ ಕಾಣುತ್ತಿದೆ. ಪ್ರಬಲ ಒಕ್ಕಲಿಗ ನಾಯಕ, ಹಾಲಿ ಶಾಸಕ ಯೋಗೇಶ್ವರ್ ಅವರನ್ನು ಮಣಿಸಲು ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವುದು ಬಹುತೇಕ ಖಚಿತವಾಗಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಪ್ರಶ್ನೆಗೆ ಶೀಘ್ರವೇ ಉತ್ತರ ಸಿಗಲಿದ್ದು, ಕಳೆದ ಎರಡು ದಿನಗಳಿಂದ ಕುಮಾರಸ್ವಾಮಿ ಅವರ ಮನೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ಹೇಳಿವೆ. ಅನಿತಾ ಕುಮಾರಸ್ವಾಮಿ ಅವರ ಸ್ಪರ್ಧೆ ಖಚಿತವಾದರೆ, ಕಾಂಗ್ರೆಸ್ ನಿಂದ ಯಾರು ಸ್ಪರ್ಧೆಗಿಳಿಯಲಿದ್ದಾರೆ ಕಾದು ನೋಡಬೇಕಿದೆ. ಈ ಮುಂಚೆ ಡಿಕೆ ಸುರೇಶ್ ಅವರು ಸ್ಪರ್ಧಿಸುವ ಬಗ್ಗೆ ಸುದ್ದಿ ಹರಡಿತ್ತು. ಅವರಿಗೆ ಚನ್ನಪಟ್ಟಣದಿಂದ ಹಾಗೂ ಪ್ರಜ್ವಲ್ ರೇವಣ್ಣ ಅವರಿಗೆ ಬೇಲೂರಿನಿಂದ ಸ್ಪರ್ಧಿಸಲು ಟಿಕೆಟ್ ನೀಡುವ ಸಾಧ್ಯತೆ ನಿಚ್ಚಳವಾಗಿದೆ.

C P yogeshwar has been contesting and wining at channapattana constituency . But this time JDS and congress have secretly formed a pact and swore to defeat C P yogeshwar

Recommended