ತನ್ನ ಹೊಸ ಕಾರ್ ಬಗ್ಗೆ ಮಾತಾಡಲು ನಿರಾಕರಿಸಿದ ದರ್ಶನ್ | Filmibeat Kannada

  • 6 years ago
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿನ್ನೆ ಮೈಸೂರಿನಲ್ಲಿ ವೆನಿಲ್ಲಾ ಸಿನಿಮಾದ ಆಡಿಯೋ ಮತ್ತು ಟ್ರೇಲರ್ ಅನ್ನ ಬಿಡುಗಡೆ ಮಾಡಿಕೊಟ್ಟಿದ್ದಾರೆ. ಬ್ಯೂಟಿಫುಲ್ ಮನಸ್ಸುಗಳು ಸಿನಿಮಾ ಖ್ಯಾತಿಯ ನಿರ್ದೇಶಕ ಜಯತೀರ್ಥ ವೆನಿಲ್ಲಾ ಸಿನಿಮಾವನ್ನ ನಿರ್ದೇಶನ ಮಾಡಿದ್ದಾರೆ.

ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಆಡಿಯೋ ಬಿಡುಗಡೆ ಮಾಡುವುದು ಹಿಂದಿನಿಂದಲೂ ಬಂದ ಪ್ರತೀತಿ. ಆದರೆ ಸಿನಿಮಾ ತಂಡ ಆಡಿಯೋ ಬಿಡುಗಡೆಗೆ ಮೈಸೂರನ್ನ ಆಯ್ಕೆ ಮಾಡಿಕೊಂಡಿದೆ ಅದಷ್ಟೇ ಅಲ್ಲದೆ ಚಾಲೆಂಜಿಂಗ್ ಸ್ಟಾರ್ ಅವರನ್ನೇ ಟ್ರೇಲರ್ ಮತ್ತು ಹಾಡುಗಳನ್ನ ಬಿಡುಗಡೆ ಮಾಡಲು ಆಯ್ಕೆ ಮಾಡಿಕೊಂಡಿದೆ. ಇವೆಲ್ಲವುದರ ಹಿಂದೆ ಸಾಕಷ್ಟು ವಿಶೇಷತೆಗಳು ಇವೆ.

ವೆನ್ನಿಲ್ಲಾ ಆಡಿಯೋ ಮತ್ತು ಟ್ರೇಲರ್ ರಿಲೀಸ್ ಮಾಡಿದ ದರ್ಶನ್ ಕುರುಕ್ಷೇತ್ರ ಸಿನಿಮಾ ಮತ್ತು ಮುಂದಿನ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಎಲ್ಲೆಡೆ ಸುದ್ದಿ ಆಗಿದ್ದ ಹೊಸ ಕಾರ್ ಬಗೆಗಿನ ಪ್ರಶ್ನೆಗೆ ಉತ್ತರಿಸಿದ್ದಾರೆ. ಹಾಗಾದ್ರೆ ದರ್ಶನ್ ಏನ್ ಹೇಳಿದ್ರು.
Kannada actor Darshan released the Vanilla Kannada Movie audio and trailer. At the same time, Darshan said Kurukshetra movie shooting was complete. Challenging star darshan refuses to talk about his new car.

Recommended