ಸಾಯುವವರೆಗೂ ನಾನು ಮೋದಿಜಿ ನಿಷ್ಠ' - ಪ್ರತಾಪ್ ಸಿಂಹ | Oneindia Kannada
  • 6 years ago
ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಭಾರತೀಯ ಜನತಾ ಪಕ್ಷವನ್ನು ತೊರೆದು ಜೆಡಿಎಸ್ ಸೇರುತ್ತಿದ್ದಾರೆ. ಪ್ರತಾಪ್ ಅವರನ್ನು ಸೆಳೆಯುವಲ್ಲಿ ಜೆಡಿಎಸ್ ಯುವ ನೇತಾರ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಂಸದ ಎಚ್ ವಿಶ್ವನಾಥ್ ಅವರು ಯಶಸ್ವಿಯಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದೆಲ್ಲವೂ ಶುದ್ಧ ಸುಳ್ಳು ಎಂದು ಫೇಸ್ ಬುಕ್ ಪೋಸ್ಟ್ ಮೂಲಕ ಸಂಸದ ಪ್ರತಾಪ್ ಸ್ಪಷ್ಟನೆ ನೀಡಿದ್ದಾರೆ.

ಹುಣಸೂರು ನಗರಸಭೆ ನೂತನ ಅಧ್ಯಕ್ಷರಾಗಿ ಜಾತ್ಯಾತೀತ ಜನತಾ ದಳ ಬೆಂಬಲಿತ ಅಭ್ಯರ್ಥಿ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಹುಣಸೂರು ನಗರಸಭಾಧ್ಯಕ್ಷರಾಗಿದ್ದ ಲಕ್ಷ್ಮಣ ಅವರನ್ನೂ ಅವಿಶ್ವಾಸ ಗೊತ್ತುವಳಿ ಮೂಲಕ ಪದಚ್ಯುತಗೊಳಿಸಲಾಗಿತ್ತು. ಹೀಗಾಗಿ ಹುಣಸೂರು ನಗರಸಭಾ ಗದ್ದುಗೆ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಜ್ವಲ್ ರೇವಣ್ಣ ಯಶಸ್ವಿಯಾಗಿದ್ದಾರೆ. ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಹ ಈ ಚುನಾವಣೆಯಲ್ಲಿ ಜೆಡಿಎಸ್ ಗೆ ಬೆಂಬಲಿಸಿದ್ದರು.
Speculations about Prathap Simha being joined JDS has been turned down by Prathap Simha himself on his Facebook page
Recommended