ಸಿದ್ದರಾಮಯ್ಯ ಹಾಗು ಡಿ ಕೆ ಶಿವಕುಮಾರ್ ಮೇಲೆ ವಾಗ್ದಾಳಿ ನಡೆಸಿದ ಎಚ್ ಡಿ ಕುಮಾರಸ್ವಾಮಿ | Oneindia Kannada
  • 6 years ago
I will never adjust with Congress leader D K Shivakumar, whether I will win or not, said JDS state president HD Kumaraswamy in Bidadi. He spoke about rumor spread about friendship with D K Shivakumar to win against C P Yogeshwar in Channapatna.


"ಚನ್ನಪಟ್ಟಣ ಕ್ಷೇತ್ರದಲ್ಲಿ ಅನಿತಾ ಅವರನ್ನು ಕಣಕ್ಕೆ ಇಳಿಸಲು ಡಿ.ಕೆ. ಶಿವಕುಮಾರ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೀನಿ ಅನ್ನೋದೆಲ್ಲ ಸುಳ್ಳು. ರಾಜಕೀಯ ಜೀವನದಲ್ಲಿ ಗೆಲ್ತೀನೋ ಸೋಲ್ತಿನೋ ಗೊತ್ತಿಲ್ಲ. ಆದರೆ ಗೆಲುವು ಸಾಧಿಸಬೇಕು ಅನ್ನೋ ಕಾರಣಕ್ಕೆ ಕಾರ್ಯಕರ್ತರಿಗೆ ವಿಷ ಹಾಕುವ ಕೆಲಸ ಮಾಡುವುದಿಲ್ಲ" ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬಿಡದಿಯಲ್ಲಿ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಕಾರ್ಯಕರ್ತನಿಗೆ ಐದು ಕೋಟಿ ಕೊಟ್ಟು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಬೇಕಾದಷ್ಟು ಕಾರ್ಯಕರ್ತರನ್ನು ಸೆಳೆಯಲಿ ಎಂದ ಎಚ್ಡಿಕೆ, ನಮ್ಮ ಒಬ್ಬ ಕಾರ್ಯಕರ್ತನನ್ನು ಸೆಳೆಯಲು ಐದು ಕೋಟಿ ಖರ್ಚು ಮಾಡುವ ಮುಖ್ಯಮಂತ್ರಿಗಳು ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎಷ್ಟು ಕೋಟಿ ಖರ್ಚು ಮಾಡಬಹುದು ಎಂದು ಪ್ರಶ್ನಿಸಿದರು.

ಈಗ ಚಿಕ್ಕಮಾದು ಕುಟುಂಬದವರನ್ನು ಪಕ್ಷಕ್ಕೆ ಸೆಳೆಯಲು ಮಾತುಕತೆ ನಡೆಸುತ್ತಿದ್ದಾರೆ. ಎಷ್ಟು ಮುಖಂಡರನ್ನು ಅನ್ಯ ಪಕ್ಷದವರು ಕೈಬಿಟ್ಟಾಗ ಕರೆತಂದು ಅವರಿಗೆ ಸಕಲ ಸವಲತ್ತು ಒದಗಿಸಿ ಬೆಳೆಸಿದ್ದೇವೆ. ಕೊನೆಗೆ ಅವರೇ ನಮಗೆ ದ್ರೋಹ ಎಸಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Recommended